newsics.com
ಬೆಂಗಳೂರು: ಹಾಲು, ವಿದ್ಯುತ್ ದರ ಸೇರಿದಂತೆ ಹಲವು ದರ ಏರಿಕೆಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಧರಣಿಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಹುಮ್ಮಸ್ಸು ಮೂಡಿಸಿದ್ದಾರೆ.
ಬೆಲೆ ಏರಿಕೆ ವಿರುದ್ಧ ಬುಧವಾರ ಮಧ್ಯಾಹ್ನದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ. ಬಳಿಕ ಇದೇ ತಿಂಗಳ 5ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದೆ. ಬಳಿಕ 7ರಿಂದ ಬೆಲೆ ಏರಿಕೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ.
ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಗೆ ಪ್ರತಿಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಎಸ್ವೈ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಶಾಸಕರು, ಮಾಜಿ ಶಾಸಕರು ಸೇರಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.
ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್ ಸೇವೆಗೆ ತಾತ್ಕಾಲಿಕ ನಿರ್ಬಂಧ!