newsics.com
ಬೆಂಗಳೂರು : ನಾಳೆಯಿಂದ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ಕರಗದ ಆಕರ್ಷಣೀಯ ಕೇಂದ್ರಬಿಂದು ಉತ್ಸವ ಏಪ್ರಿಲ್ 14ಕ್ಕೆ ನಡೆಯಲಿದೆ.
ಶುಕ್ರವಾರ ರಾತ್ರಿ 10 ಗಂಟೆಗೆ ಕರಗದ ಆಚರಣೆಗಳು ಶುರುವಾಗಲಿದ್ದು. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.ದೇವಿ ದರ್ಶನಕ್ಕೆ ಜನರು ಕಾತುರರಾಗಿದ್ದಾರೆ.
ಐತಿಹಾಸಿಕ ಕರಗ ಮಹೋತ್ಸವದಲ್ಲಿ 20 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ.ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ.ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ.ಪೊಲೀಸರು ಪ್ರತಿನಿತ್ಯ ಗಸ್ತು ತಿರುಗಲಿದ್ದು , ಏಪ್ರಿಲ್ 14ಕ್ಕೆ ದೊಡ್ಡ ಮಟ್ಟದಲ್ಲಿ ಬಂದೋಬಸ್ತ್ ನಿಯೋಜನೆ ಮಾಡಲು ಸಿದ್ಧತೆ ನಡೆದಿದೆ.
Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್