newsics.com
ಕೊಪ್ಪಳ: ಶಾಲೆಗೆಂದು ಹೊರಟಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರ ಮೇಲೆ ಆಕಸ್ಮಿಕ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಂಗಮರ ಕಲ್ಗುಡಿಯಲ್ಲಿ ಗುರುವಾರ ನಡೆದಿದೆ.
ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿ ರಸ್ತೆಯಲ್ಲಿರುವ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಅವರು ವಿದ್ಯಾನಗರದಲ್ಲಿರುವ ಶ್ರೀ ಗೊಟ್ಟಿಪಾಟಿ ವೆಂಕಟರತ್ನಂ ಮೆಮೋರಿಯಲ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಎಂದಿನಂತೆ ಶಾಲೆಗೆ ಹೋಗಲು ತಮ್ಮ ಮನೆಯಿಂದ ಮಾವ ಪೂರ್ಣಚಂದ್ರರಾವ್ ಅವರೊಂದಿಗೆ ಬೈಕ್ನಲ್ಲಿ ಶಿಕ್ಷಕಿ ಹರಿತಾ ಬಂದಿದ್ದಾರೆ. ಆದರೆ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಪ್ರವಹಿಸಿ ತಂತಿ ಶಿಕ್ಷಕಿಯ ಮೇಲೆ ಬಿದ್ದಿದೆ. ಹೀಗಾಗಿ ವಿದ್ಯುತ್ ತಗುಲಿದ್ದರಿಂದ ಶಿಕ್ಷಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕಿಗೆ ನಾಲ್ಕು ವರ್ಷದ ಅವಳಿ ಮಕ್ಕಳಿವೆ ಎಂದು ತಿಳಿದು ಬಂದಿದೆ.
https://www.newsics.com/2025/04/03/karaga-the-grand-bangalore-karaga-festival-begins-tomorrow/