newsics.com
ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರದ ನಾಗವಾರದ ಕಚೇರಿಯಲ್ಲಿಯೇ ನಡೆದಿದೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ.
ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
https://www.newsics.com/2025/04/04/a-68-year-old-man-falls-in-love-with-a-25-year-old-beauty/