newsics.com
ಮಧ್ಯಪ್ರದೇಶ: ಬಾವಿ ಸ್ವಚ್ಛಗೊಳಿಸುವಾಗ ಸೋರಿಕೆಯಾದ ವಿಷಕಾರಿ ಅನಿಲ ಸೇವನೆಯಿಂದ
ಎಂಟು ಜನರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಕೊಂಡಾವತ್ನಲ್ಲಿ ನಡೆದಿದೆ.
ಗಂಗೌರ್ ಮಾತಾ ವಿಶೇಷ ಆಚರಣೆಗಾಗಿ ಛೈಗಾಂವ್ ಮಖಾನ್ ಪ್ರದೇಶದಲ್ಲಿನ ಬಾವಿ ಸ್ವಚ್ಛ ಮಾಡುವಾಗ ಈ ದುರಂತ ಸಂಭವಿಸಿದೆ.
ಅವರು ಉಸಿರುಗಟ್ಟಿದಾಗ ರಕ್ಷಣೆಗೆ ಇನ್ನೂ ಆರು ಮಂದಿ ಬಾವಿಯೊಳಗೆ ಇಳಿದಿದ್ದಾರೆ. ಅವರೂ ಕೂಡ ಹೊರಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.