newsics.com
ವಿಜಯಪುರ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.
ಇದೀಗ ಇದೇ ವಿಚಾರವಾಗಿ ಇದೀಗ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಪಂಚಮಸಾಲಿ ಸಮುದಾಯಕ್ಕೆ ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.
ಹೈಕಮಾಂಡ್ ನಾಯಕರ ಗಮನ ಸೆಳೆಯಲು ನಿರ್ಧರಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.
ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ವಿರೋಧಿಸಿ ಮೇ 11ರಂದು ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ವಿಜಯಪುರ ನಗರದಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿರಾಟ್ ರಾಷ್ಟ್ರೀಯ ರ್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸುಮಾರು 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಸಮರ ಸಾರಿದ್ದು, ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.
PANCHAYAT ELECTIONS : ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್