ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ಮಾಸ್ಟರ್ ಮೈಂಡ್ ಪವಿತ್ರಾಗೌಡ ಆರ್ಆರ್ ನಗರ ಶೆಡ್ ನಲ್ಲಿ ಹೊಡೆದಿದ್ದರ ಬಗ್ಗೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಕೊಲೆಯಾಗಿರುವ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿದ್ದಾಗಿ ಪೊಲೀಸರ ತನಿಖೆಗೆ ವೇಳೆ ಕೊಲೆ ಆರೋಪಿ ನಟ ದರ್ಶನ್ ವಿರುದ್ಧವಾಗಿಯೇ ಹೇಳಿಕೆಯನ್ನ ನೀಡಿದ್ದಾರಂತೆ. ನಾನು ಚಪ್ಪಲಿಯಲ್ಲಿ ಒಮ್ಮೆ ಹೊಡೆದು ಸುಮ್ಮನೆ ನಿಂತಿರುವಾಗ ದರ್ಶನ್, ರೇಣುಕಾಸ್ವಾಮಿಯ ಮೇಲೆ ಮನ ಬಂದಂತೆ ಹಲ್ಲೆ ಮಾಡಿದ್ದಾಗಿ ತನಿಖೆಯ ವೇಳೆ ಹೇಳಿದ್ದಾರೆ ಎನ್ನಲಾಗಿದೆ.
ಹತ್ಯೆಯಲ್ಲಿ ನಟ ದರ್ಶನ್ ಎಂಟ್ರಿಯಾಗಿದ್ದೆ ಎ1 ಆರೋಪಿಯಾಗಿರುವ ಪವಿತ್ರಾಗೌಡರಿಗಾಗಿ. ಅದೇ ಪವಿತ್ರಾಗೌಡ ದರ್ಶನ್ ಹಲ್ಲೆ ಬಗ್ಗೆ ಪೊಲೀಸರ ಮುಂದೆ ಹೇಳಿರೋದು ದರ್ಶನ್ ಗೆ ಒಂದು ರೀತಿಯಲ್ಲಿ ಅರಗಿಸಿಕೊಳ್ಳಲಾಗಂತಹ ವಿಷಯವಾಗಿರುತ್ತೆ.