newsics.com
ಬಿಹಾರ : ಬಿಹಾರದ ಬಿಜೆಪಿ ನಾಯಕರೊಬ್ಬರ ಪುತ್ರಿ ಮೇಲೆ ದುಷ್ಕರ್ಮಿ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ.
24 ವರ್ಷದ ಯುವತಿ ತನ್ನ ಮನೆಯಲ್ಲಿ ಮಲಗಿರುವಾಗ ಆಕೆಯ ಮೇಲೆ ಆ್ಯಸಿಡ್ ಎರೆಚಲಾಗಿದೆ. ದಾಳಿಯಲ್ಲಿ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಬಿಜೆಪಿ ಮಾಜಿ ಉಪಾಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಅವರ ಪುತ್ರಿ ಪಲ್ಲವಿ ರಾಥೋಡ್ ಮೇಲೆ ದಾಳಿ ನಡೆದಿದ್ದು, ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಕ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ರಿ ಬಜಾರ್ನಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ರಾಥೋಡ್ ಮಲಗಿದ್ದಾಗ ಅಪರಿಚಿತ ವ್ಯಕ್ತಿಗಳು ಮನೆಯ ಗೋಡೆಯನ್ನು ಹಾರಿ ಕಿಟಕಿಯ ಮೂಲಕ ಆಸಿಡ್ ಎಸೆದಿದ್ದಾರೆ. ದಾಳಿಯಲ್ಲಿ ಆಕೆಯ ಮುಖ ಮತ್ತು ದೇಹವು ತೀವ್ರ ಸುಟ್ಟ ಗಾಯಗಳಾಗಿವೆ.
ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ರಾಥೋಡ್ ಎರಡು ವರ್ಷಗಳ ಹಿಂದೆ ಬೇಗುಸರಾಯ್ನ ಕಾಲೇಜಿನಿಂದ ಪದವಿ ಮುಗಿಸಿದ್ದರು ಮತ್ತು ಮನೆಯಲ್ಲಿದ್ದುಕೊಂಡೇ ಸರ್ಕಾರಿ ಸೇವಾ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಆಕೆಯ ತಂದೆ ಬಿಹಾರ ಪೊಲೀಸರಿಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ.
Missing ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ, ಶೋಧ ಕಾರ್ಯಾಚರಣೆ