newsics.com
ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.
ಮಂಗಳೂರಿನ ಕದ್ರಿಯ ಬಾರೆಬೈಲ್ ನಲ್ಲಿ ನಡೆದ ವಾರ್ಷಿಕ ಉತ್ಸವದಲ್ಲಿ ನಟ ರಿಷಬ್ ಶೆಟ್ಟಿ ಭಾಗಿಯಾಗಿದ್ದರು.ಈ ವೇಳೆ ದೈವ ಪಂಜುರ್ಲಿ ರಿಷಬ್ ಶೆಟ್ಟಿಗೆ ಎಚ್ಚರಿಕೆ ಹಾಗೂ ಅಭಯವನ್ನು ನೀಡಿದೆ.
ಕಾಂತಾರ 1 ಗೆ ಇಡೀ ದೇಶವೇ ಎದುರು ನೋಡುತ್ತಿದ್ದರೆ, ಇತ್ತ ರಿಷಭ್ ಶೆಟ್ಟಿ ಮಾತ್ರ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಿಸುತ್ತಿದ್ದಾರೆ. ಇವೆಲ್ಲದರ ನಡುವೆ ರಾತ್ರೋರಾತ್ರಿ ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ಭಾಗಿಯಾಗಿದ್ದಾರೆ.
ಈ ವೇಳೆ ಪಂಜುರ್ಲಿ ದೈವದ ಬಳಿ ರಿಷಭ್ ಶೆಟ್ಟಿ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ದೈವವು ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳು ಹೆಚ್ಚಾಗಿದ್ದಾರೆ, ನಿನ್ನ ಸಂಸಾರವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ ಮುಂದಿನ 5 ತಿಂಗಳ ಗಡುವಲ್ಲಿ ಒಳ್ಳೇದು ಮಾಡುತ್ತೇನೆ ಎಂದು ಅಭಯ ನೀಡಿದೆ.
ಈ ಹಿಂದೆ ಜೂನಿಯನ್ ಆರ್ಟಿಸ್ಟ್ ಗಳ ವಾಹನ ಪಲ್ಟಿಯಾಗಿತ್ತು. ಇದಲ್ಲದೆ ಅರಣ್ಯದಲ್ಲಿ ಸ್ಫೋಟಕವನ್ನು ಬಳಸಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಎಲ್ಲ ಸವಾಲು – ಸಂಕಷ್ಟಗಳನ್ನು ಎದುರಿಸಿಕೊಂಡು ಚಿತ್ರತಂಡ ಬಹುತೇಕ ಚಿತ್ರೀಕರಣವನ್ನು ಮುಗಿಸಿದ್ದು, ಇದೇ ಅಕ್ಟೋಬರ್ 2 ರಂದು ಚಿತ್ರವನ್ನು ರಿಲೀಸ್ ಮಾಡಲು ನಿರ್ಧರಿಸಿದೆ.
Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್