newsics.com
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಕಲಾ ವಿಭಾಗ
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ಸಂಜನಾ ಬಾಯಿ ಲಾರಿ ಡ್ರೈವರ್ ಪುತ್ರಿಯಾಗಿದ್ದಾಳೆ.
ವಿಜ್ಞಾನ ವಿಭಾಗ
ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ವೈದ್ಯ ದಂಪತಿಯ ಪುತ್ರಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಇವರು ಯಾವುದೇ ಟ್ಯೂಷನ್ಗೆ ಹೋಗದೆ ಕಾಲೇಜಿನಲ್ಲಿ ಕಲಿಸಿದ ಪಾಠವನ್ನೇ ಓದಿ ಸಾಧನೆ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಅಮೂಲ್ಯ ಕಾಮತ್, ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿರುವ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ. ಇವರು 600ಕ್ಕೆ 599 ಅಂಕ ಪಡೆದುಕೊಂಡಿದ್ದಾರೆ.
ಇವರು ಡಾ.ದಿನೇಶ್ ಕಾಮತ್ ಮತ್ತು ಡಾ.ಅನುರಾಧ ಕಾಮತ್ ಅವರ ಮಗಳು. ಅಮೂಲ್ಯ ಕಾಮತ್ಗೆ ತಂದೆ, ತಾಯಿಯಂತೆ ವೈದ್ಯಳಾಗುವ ಆಸೆ ಇಲ್ಲ. ತಾಂತ್ರಿಕ ಕಲಿಕೆಯ ಆಸಕ್ತಿ ಇರುವ ಈಕೆ ಇಂಜಿನಿಯರ್ ಆಗುವ ಗುರಿ ಇಟ್ಟುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ
ಶಿವಮೊಗ್ಗದ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾರೆ.
ದೀಕ್ಷಾ ಅವರ ತಂದೆ ರಾಘವೇಂದ್ರ ಕಲ್ಕೂರ್ ಮೇಲಗವಳ್ಳಿಯಲ್ಲಿ ಶಿಕ್ಷಕರು. ತಾಯಿ ಉಷಾ ತೀರ್ಥಹಳ್ಳಿಯ ಬಾಲಕಿಯರ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಗಳು ರಾಜ್ಯಕ್ಕೆ 2ನೇ ಟಾಪರ್ ಅಗಿದ್ದಕ್ಕೆ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಸಿಹಿ ತಿನ್ನಿಸಿ ಹರ್ಷ ವ್ಯಕ್ತಪಡಿಸಿದರು.
PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್