newsics.com
ಬೆಂಗಳೂರು: ಬೇಸಿಗೆ ರಜೆಯ ನಿವಾಸಿಗಳು ಮನೆಯ ಭದ್ರತೆ ಬಗ್ಗೆ ಸಾಕಷ್ಟು ಎಚ್ಚರದಿಂದ ಇರಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸಲಹೆ ನೀಡಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ.
ಕುಟುಂಬ ಸಮೇತ ಊರಿಗೆ ತೆರಳುವ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮನೆಯಲ್ಲಿ ಇಟ್ಟಿರೋ ಚಿನ್ನ, ಹಣ ಹಾಗೂ ಮೌಲ್ಯಯುತ ವಸ್ತುಗಳ ಬಗ್ಗೆ ಜಾಗೃತಿ ವಹಿಸೋಕೆ ಸೂಚಿಸಿದ್ದಾರೆ.
ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ. ವಿಶೇಷವಾಗಿ, ಮನೆಗೆ ಬೇಗ ಹಾಕಿ ಊರಿಗೆ ಅಥವಾ ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರು ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.
ಮನೆಗೆ ಗುಣಮಟ್ಟದ ಬೀಗ ಅಳವಡಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಎಲ್ಲೋ ಇಟ್ಟು ಹೋಗುವ ಅಭ್ಯಾಸ ಮಾಡಬೇಡಿ. ಒಂದಕ್ಕಿಂತ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತೆರಳಿ. ಇಂಥ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಗಸ್ತು ನಡೆಸುವುದು ಪೊಲೀಸರಿಗೂ ಸುಲಭವಾಗುತ್ತದೆ ಎಂದು ದಯಾನಂದ್ ತಿಳಿಸಿದ್ದಾರೆ.