newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ದರ್ಶನ್ರನ್ನು ನೋಡಲು ತಾಯಿ ಮೀನಾ, ಪತ್ನಿ ಮತ್ತು ಮಗ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ತಾಯಿಯನ್ನು ನೋಡಿ ದರ್ಶನ್ ಕಣ್ಣೀರಿಟ್ಟಿದ್ದಾರೆ.
ಇಂದು ಬೆಳಗ್ಗೆ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.
ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!