newsics.com
ದೇಶದಲ್ಲಿ ಒಟ್ಟು 5 ಚಂಡಮಾರುತದ ಪರಿಚಲನೆಗಳು ರೂಪುಗೊಳ್ಳುತ್ತಿವೆ. ಅವುಗಳ ಪರಿಣಾಮದಿಂದಾಗಿ, ದೇಶದ ವಿವಿಧ ಭಾಗಗಳಲ್ಲಿ ಹವಾಮಾನವು ಹದಗೆಡುವ ಸಾಧ್ಯತೆಯಿದೆ. ಹಲವು ರಾಜ್ಯಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂಬರುವ 24 ರಿಂದ 48 ಗಂಟೆಗಳಲ್ಲಿ ಅನೇಕ ರಾಜ್ಯಗಳಲ್ಲಿ, ವಿಶೇಷವಾಗಿ ಪೂರ್ವದಲ್ಲಿ, ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಐದು ಚಂಡಮಾರುತಗಳ ಪರಿಚಲನೆಯಿಂದಾಗಿ, ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇಂದು ಮಧ್ಯ ಭಾರತ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 17 ಮತ್ತು 18 ರಂದು ಬಿಹಾರ, 16 ರಿಂದ 18 ರಂದು ಜಾರ್ಖಂಡ್ ಮತ್ತು ಒಡಿಶಾ ಹಾಗೂ ಛತ್ತೀಸ್ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂಬರುವ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರ ಕನ್ನಡ, ಚಿಕ್ಕಮಗಳೂರು ಸಕಲೇಶಪುರ, ಶಿವಮೊಗ್ಗದ ಕೆಲವು ಭಾಗದಲ್ಲಿ ಕೂಡ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.
https://www.newsics.com/2025/04/16/viaduct-collapses-hits-auto-driver-dies/