newsics.com
ಬೆಂಗಳೂರು : ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 20ರವರೆಗೆ ಭರ್ಜರಿ ಮಳೆಯೊಂದಿಗೆ ಗುಡುಗು, ಮಿಂಚು ಮತ್ತು ಬಿರುಗಾಳಿಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಈ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ನಿಲುಗಡೆಯಾಗುವ ಸಾಧ್ಯತೆಯಿದೆ. ಸಂಚಾರ ವ್ಯತ್ಯಯ, ವಿದ್ಯುತ್ ಕಡಿತ ಮತ್ತು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು.