newsics.com
ರಾಯಚೂರು : ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ.
ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
https://www.newsics.com/2025/04/18/what-happens-if-you-drink-a-glass-of-orange-juice-every-day/