newsics.com
ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದ್ದು, ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಜನಿವಾರ ತೆಗಿಸಿದ ಕೆಇಎ ಅಧಿಕಾರಿ ಕ್ಷಮೆ ಯಾಚಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಇದನ್ನ ಕೆಇಎ ಒಪ್ಪೋದಿಲ್ಲ. ಕೆಇಎ ಇಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ. ತಪ್ಪು ಆಗಿದೆ ಇದಕ್ಕೆ ಕೆಇಎ ವಿಷಾದ ವ್ಯಕ್ತಪಡಿಸಿಸುತ್ತದೆ ಎಂದರು.
ಘಟನೆಗೆ ಕುರಿತು ನಾನೇ ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳ್ತೀನಿ, ಮುಂದೆ ಇಂತಹ ಘಟನೆ ಆಗದಂತೆ ಕಠಿಣ ಮಾರ್ಗಸೂಚಿ ಪ್ರಕಟ ಮಾಡ್ತೀವಿ. ಯಾವುದೇ ಜಾತಿ, ಧರ್ಮದ ವಿರುದ್ದ ನಾವು ಮಾರ್ಗಸೂಚಿ ಸಿದ್ದ ಮಾಡೋದಿಲ್ಲ. ಈಗ ತಪ್ಪು ಆಗಿದೆ, ಇಂತಹ ತಪ್ಪು ಮುಂದೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಡಿಸಿಯಿಂದ ವರದಿ ತೆಗೆದುಕೊಂಡು ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಅ ವಿದ್ಯಾರ್ಥಿಗೆ ನ್ಯಾಯ ಕೊಡ್ತೀವಿ. ಇಂತಹ ತಪ್ಪು ಮುಂದೆ ಆಗದಂತೆ ನೋಡಿಕೊಳ್ತೀವಿ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಸಿಗಲಿಲ್ಲ- ಸಂಚಲನ ಸೃಷ್ಟಿಸಿದ ವಿವಾದ