newsics.com
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ.
ಕಳೆದು ಎರಡು ಮೂರು ತಿಂಗಳಿಂದ ಕುಮಾರಸ್ವಾಮಿ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಕೆಮ್ಮು ಕಡಿಮೆಯಗಾತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜಿಂದಾಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಪೋಲೋ ಆಸ್ಪತ್ರೆಯಲ್ಲಿಯೂ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ವೈದ್ಯರ ಸಲಹೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಎರಡು ವಾರಗಳ ಕಾಲ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅವಶ್ಯಕತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ದಟ್ಟವಾಗಿದೆ.
Building collapse ದೆಹಲಿಯಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ, ವೈರಲ್ ವಿಡಿಯೋ ನೋಡಿ