newsics.com
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈಗಾಗಲೇ ರಿಕ್ಕಿ ರೈ ಕಾರು ಚಾಲಕ ಬಸವರಾಜು ನೀಡಿದ ದೂರಿನ ಅನ್ವಯ ಮುತ್ತಪ್ಪ ರೈ 2ನೇ ಪತ್ನಿ ಅನುರಾಧಾ, ಮುತ್ತಪ್ಪ ರೈನ ಒಂದು ಕಾಲದ ಆಪ್ತ ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಿನ್ನೆ ಬಿಡದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದ ವೇಳೆ ವಿಠಲ್ ರಾವ್ ಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಠಲ್ ರಾವ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಕೆಲದಿನಗಳ ಹಿಂದೆ ಗುಂಡಿನ ದಾಳಿ ನಡೆದಿತ್ತು. ಬಿಡದಿಯ ಮನೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಅವರ ಮೇಲೆ ಫೈರಿಂಗ್ ನಡೆಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ನಡುವೆ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದ್ದು, ಸೆಲ್ಫ್ ಫೈರಿಂಗ್ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Indian Cow Dung ಭಾರತೀಯ ಹಸುವಿನ ಸಗಣಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್: ಖರೀದಿಗೆ ಮುಗಿಬೀಳ್ತಿದ್ದಾರೆ ಜನ!