newsics.com
ನವದೆಹಲಿ: ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿ, ವಕೀಲರೊಬ್ಬರಿಗೆ ₹5 ಲಕ್ಷ ದಂಡ ಸುಪ್ರೀಂ ಕೋರ್ಟ್ ವಿಧಿಸಿದೆ.
ನ್ಯಾ. ವಿಕ್ರಂ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರಿದ್ದ ಪೀಠದ ಎದುರು ವಕೀಲ ಸಂದೀಪ್ ತೊಡಿ ಎಂಬುವವರು ತಮ್ಮದೇ ಕೌಟುಂಬಿಕ ವಿವಾದ ಪ್ರಕರಣವೊಂದರಲ್ಲಿ, ಸಲ್ಲಿಸಲಾದ ಅರ್ಜಿಯನ್ನು ಹಿಂಪಡೆಯಲು ವಕೀಲರು ನ್ಯಾಯಾಲಯದಿಂದ ಅನುಮತಿ ಕೋರಿದರು.
ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ವಾತಾವರಣವನ್ನು ಹಾಳು ಮಾಡಿದ್ದೀರಿ ಎಂದು ನ್ಯಾಯಾಲಯವು ವಕೀಲರಿಗೆ ತಿಳಿಸಿದೆ. ನ್ಯಾಯಾಲಯವು ವಕೀಲರಿಗೆ 5 ಲಕ್ಷ ರೂ. ದಂಡವನ್ನೂ ವಿಧಿಸಿದೆ.
ವ್ಯಕ್ತಿಗಳು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಅದನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಸಂಪರ್ಕಿಸಬಹುದು ಎಂದು ಸಾಂವಿಧಾನಿಕ ಹಕ್ಕುಗಳನ್ನು ಖಾತ್ರಿಪಡಿಸುವ 32ನೇ ವಿಧಿಯಲ್ಲಿ ಹೇಳಲಾಗಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಕೀಲ ಸಂದೀಪ್ ಟೋಡಿ ಅವರಿಗೆ ನಾಲ್ಕು ವಾರಗಳ ಒಳಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಖಾತೆಗೆ ಮೊತ್ತವನ್ನು ಜಮಾ ಮಾಡುವಂತೆ ಹೇಳಿದೆ.