newsics.com
ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸುಪ್ರೀಂಕೋರ್ಟ್ನಲ್ಲಿ ಒಂದು ಗಂಟೆ ಸುದೀರ್ಘ ವಿಚಾರಣೆ ನಡೆಯಿತು. ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ವಿಶೇಷ ಮೇಲ್ಮನವಿ ಇದಾಗಿದ್ದು, ಇದರ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿದೆ. ಮಂಗಳವಾರ ನಡೆದ ವಿಚಾರಣೆ ಸಂದರ್ಭದಲ್ಲಿ, ದರ್ಶನ್ ಪರ ವಕೀಲ ಅಭಿಷೇಕ್ ಸಿಂಗ್ವಿ ಹಾಗೂ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಇತರರು ವಾದ ಮಂಡಿಸಿದರು.
ಯಾಕೆಂದರೆ ದರ್ಶನ್ಗೆ ನೀಡಿರುವ ಜಾಮೀನು ರದ್ದು ಮಾಡಬೇಕೆಂದು ಕೋರಿ ಖಾಕಿ ಪಡೆ ಸುಪ್ರೀಂ ಕೋರ್ಟ್ನ ಮೆಟ್ಟಿಲನ್ನೇರಿದೆ. ಇದರಿಂದ ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಹೀಗಾಗಿ ಯಾವ ಕ್ಷಣದಲ್ಲಿ ಅದೇನಾಗುತ್ತೋ ಎಂಬ ಭಯ ದರ್ಶನ್ ಅವರಿಗೆ ಇದ್ದೇ ಇದೆ.
ಆಗ ನ್ಯಾಯಮೂರ್ತಿಗಳು ಹಾಗಿದ್ದರೆ ದರ್ಶನ್ ಅವರಿಗೆ ಮದುವೆಯಾಗಿಯೇ ಎನ್ನುವ ಪ್ರಶ್ನೆಗೆ ವಕೀಲರು ಹೌದು. ಅವರು ಕನ್ನಡದ ಖ್ಯಾತ ನಟರು ಕೂಡ ಎಂದು ವಿವರಣೆ ನೀಡಿದ್ದಾರೆ. ಇದೇ ವೇಳೆ ವಾದ ಮಂಡಿಸಿದ ದರ್ಶನ್ ಪರ ವಕೀಲ ಸಿಂಗ್ವಿ ಅವರು ದರ್ಶನ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಇಲ್ಲ. ಯಾವ ಜಾಗದಲ್ಲಿ ಈ ಘಟನೆ ನಡೆದಿದೆ ಎಂಬುದಕ್ಕೆ ಸರಿಯಾದ ಸಾಕ್ಷ್ಯಾಧಾರಗಳೂ ಇಲ್ಲ. ಘಟನೆ ನಡೆದ ಸಂದರ್ಭದಲ್ಲಿನ ಮೂರು ಸೆಕೆಂಡ್ ವಿಡಿಯೋ ಇದೆ ಎನ್ನಲಾಗುತ್ತಿದೆ. ಆದರೆ ಅದರಲ್ಲಿ ಎಲ್ಲಿಯೂ ದರ್ಶನ್ ಕಾಣಿಸಿಕೊಂಡಿಲ್ಲ ಎಂದು ವಾದಿಸಿದರು. ಹಾಗೂ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅವರು ಕಳುಹಿಸುತ್ತಿದ್ದ ಮೆಸೇಜ್ಗಳ ಬಗ್ಗೆಯೂ ಈ ಸಂದರ್ಭದಲ್ಲಿ ಅವರು ಪ್ರಸ್ತಾಪಿಸಿದರು
ಸುಪ್ರೀಂ ಕೋರ್ಟ್ನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ನಡೆದಿದೆ. ವಿಚಾರಣೆ ಮೇ 14ಕ್ಕೆ ನ್ಯಾಯಾಲಯ ಮುಂದೂಡಿದೆ. ಆದರೆ ಈ ಸಮಯದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಸಂಬಂಧದ ಕುರಿತು ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ. ಮಹದೇವರ್ ಅವರಿದ್ದ ದ್ವಿ ಸದಸ್ಯ ಪೀಠ ಪ್ರಶ್ನೆ ಮಾಡಿದೆ.
ಇದಕ್ಕೆ ಆ ನಂತರ ವಿಜಯಲಕ್ಷ್ಮಿ ಪತ್ರದ ಮೂಲಕ ನಾನು ದರ್ಶನ್ ಅವರ ಏಕೈಕ ಪತ್ನಿ, ಪವಿತ್ರಾ ಗೌಡ ಸ್ನೇಹಿತೆಯಷ್ಟೇ ಎಂದು ಹೇಳಿದ್ದರು. ದಾಖಲೆಗಳಲ್ಲಿ ಸರಿಯಾದ ಮಾಹಿತಿ ಉಲ್ಲೇಖಿಸುವಂತೆ ಮನವಿಯನ್ನು ಮಾಡಿದ್ದರು. ಆದರೂ ಕೂಡ ಅನೇಕರಲ್ಲಿ ಇನ್ನು ಗೊಂದಲ ಇದ್ದೇ ಇದೆ.
ಹೀಗಿರುವಾಗ ಮಂಗಳವಾರ ನ್ಯಾಯಾಲಯದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧದ ಕುರಿತು ಚರ್ಚೆಯಾಗಿದೆ. ಹೌದು, ಮಂಗಳವಾರ ನಡೆದ ವಿಚಾರಣೆಯಲ್ಲಿ ದರ್ಶನ್ಗೆ ಮದುವೆ ಆಗಿದೆಯೇ ? ಪವಿತ್ರಾ ಗೌಡ ದರ್ಶನ್ ಪತ್ನಿಯೇ ಎಂಬ ಪ್ರಶ್ನೆಯನ್ನು ನ್ಯಾಯಾಧೀಶರು ಕೇಳಿದ್ದಾರೆ. ಇದಕ್ಕೆ ಸರ್ಕಾರದ ಪರ ವಕೀಲರಾದ ಸಿದ್ಧಾರ್ಥ್ ಲೂಥ್ರಾ ಬಳಸಿದ ಪದ ಅಲ್ಲಿದ್ದವರನ್ನು ಅಚ್ಚರಿಗೆ ದೂಡಿದೆ.
Rajinikanth: ರಜನಿಯನ್ನು ಕಾಣ್ತಿದ್ದಂತೆ ಕೈಯಲ್ಲೇ ಕರ್ಪೂರ ಉರಿಸಿ ಆರತಿ ಬೆಳಗಿದ ಫ್ಯಾನ್ಸ್