newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾಗ ಉಗ್ರನಿಂದ ರೈಫಲ್ ಕಸಿದುಕೊಳ್ಳಲು ಯತ್ನಿಸಿದ ಸ್ಥಳೀಯ ಕುದುರೆ ರೈಡರ್ ಬಲಿಯಾಗಿದ್ದಾರೆ.
ಸೈಯದ್ ಆದಿಲ್ ಹುಸೇನ್ ಶಾ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಸೈಯದ್ ಆದಿಲ್ ಪಹಲ್ಗಾಮ್ ಕಾರು ಪಾರ್ಕಿಂಗ್ ಸ್ಥಳದಿಂದ ಕುದುರೆಯ ಮೇಲೆ ಪ್ರವಾಸಿಗರನ್ನು ಬೈಸರನ್ಗೆ ಕರೆದುಕೊಂಡು ಬರುವ ಕೆಲಸ ಮಾಡುತ್ತಿದ್ದರು.