newsics.com
ಬೆಳಗಾವಿ: ಕುರಿ ಕಾಯುತ್ತಿರುವಾಗಲೇ ಯುಪಿಎಸ್ಸಿ ಫಲಿತಾಂಶ ಬಂದಿದ್ದು, ಯುವಕ ಪಾಸಾದ ಸುದ್ದಿ ತಿಳಿದು ಕುಣಿದು ಕುಪ್ಪಳಿಸಿದ್ದಾರೆ. ಪರೀಕ್ಷೆಯಲ್ಲಿ ದೇಶಕ್ಕೆ 551 ರ್ಯಾಂಕ್ ಪಡೆದಿದ್ದಾರೆ.
ಕುರಿಗಾಹಿಯ ಪುತ್ರ ಯುಪಿಎಸ್ ಸಿ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಎಮಗೆ ಗ್ರಾಮದ ಸಿದ್ದಪ್ಪ ಹಾಗೂ ಬಾಳವ್ವ ಡೋಣಿ ದಂಪತಿಗಳ ತೃತಿಯ ಸುಪುತ್ರ ಬೀರಪ್ಪ ಸಿದ್ದಪ್ಪ ಡೋಣಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಯುವಕ ಬೀರಪ್ಪ ಸದ್ಯ ಬೆಳಗಾವಿ ತಾಲೂಕಿನ ನಾನಾವಾಡಿಯಲ್ಲಿದ್ದು, ಗದ್ದೆಯೊಂದರಲ್ಲಿ ಕುರಿ ಮೇಯಿಸುತ್ತಿದ್ದಾರೆ.
ಯುವಕ ಬೀರಪ್ಪ ಕುರಿ ಕಾಯುತ್ತಾ ಯುಪಿಎಸ್ಸಿಗೆ ತಯಾರಿ ನಡೆಸಿದ್ದರು. ಬೀರಪ್ಪ ಅವರ ಸಾಧನೆಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ಬೀರಪ್ಪ ಅವರ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಕುಟುಂಬಸ್ಥರು ಬೀರಪ್ಪ ಅವರಿಗೆ ಆರತಿ ಎತ್ತಿ ಹಾರ ಹಾಕಿ ಕೈಗೆ ಕುರಿ ಮರಿ ಕೊಟ್ಟು ಸ್ಮಾನಿಸಿದ್ದಾರೆ.