newsics.com
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ರಾಜ್ಯ ಸರಕಾರದ ಈ ಸಾಲಿನ 9ನೇ ಸಚಿವ ಸಂಪುಟ ಸಭೆ ನಡೆಯಲಿದೆ.
ಮಾದಪ್ಪನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಸರ್ಕಾರ ಈ ಹಿಂದೆ ಮೂರು ಬಾರಿ ನಿರ್ಧರಿಸಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಗೆ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.
ಸಭೆಯಲ್ಲಿ ಜಾತಿಗಣತಿ ವರದಿ ಕುರಿತಾಗಿ ಸಚಿವರ ಅಭಿಪ್ರಾಯಗಳನ್ನು ಸಿಎಂ ಪಡೆಯಲಿದ್ದು, ಮೇ.2ರಂದು ಅಂತಿಮವಾಗಿ ಈ ಬಗ್ಗೆ ನಿರ್ಧರಿಸಲು ಸರ್ಕಾರ ಸಜ್ಜಾಗಿದೆ. ಮಾದಪ್ಪನ ಬೆಟ್ಟದಲ್ಲಿ ನಡೆಯಲಿರುವ ಈ ಸಚಿವ ಸಂಪುಟ ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಉಡುಪಿ, ಮಂಗಳೂರು ಮತ್ತು ಹಾಸನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಕುರಿತಂತೆ ಮಹತ್ವದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಇತಿಹಾಸದಲ್ಲೇ ಇದುವರೆಗೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆದಿರಲಿಲ್ಲ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಬಿಳಿಗಿರಂಗನ ಬೆಟ್ಟದಲ್ಲಿ ಮಿನಿ ಸಚಿವ ಸಂಪುಟ ಸಭೆ ನಡೆದಿತ್ತು.
ಆದರೆ ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ನಡೆಯುತ್ತಿದೆ. ಸಂಪುಟ ಸಭೆಯಲ್ಲಿ ಹಿಂದುಳಿದ ಚಾಮರಾಜನಗರ ಜಿಲ್ಲೆಗೆ ವಿಶೇಷ ಅನುದಾನ, ಯೋಜನೆಗಳು ದೊರಕುವ ಆಶಾಭಾವನೆ ಹೊಂದಲಾಗಿದೆ.
ಈ ಸಚಿವ ಸಂಪುಟ ಸಭೆ ಮೈಸೂರು ವಿಭಾಗದ 8 ಜಿಲ್ಲೆಗಳಿಗೆ ಸಂಬಂಧಿಸಿ ನಡೆಯುತ್ತಿರುವ ಸಭೆ. ಇದರಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಂಬಂಧಿಸಿ ಪರಾಮರ್ಶೆ ನಡೆಯಲಿದೆ. ಸಭೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದರಿಂದ ಈ ಜಿಲ್ಲೆಯ ಸಮಸ್ಯೆಗಳಿಗೆ ಆದ್ಯತೆ ನೀಡಬಹುದೆಂಬ ನಿರೀಕ್ಷೆ ಇದೆ.
JAMMU TERROR ATTACK : ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ