newsics.com
ಬೆಂಗಳೂರು: ಮಾಜಿ ಡಿಜಿ ಹಾಗೂ ಐಜಿಪಿ ಒಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಕೊಲೆ ನಡೆದ ದಿನವೇ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.
ಇನ್ನು ಓಂ ಪ್ರಕಾಶ್ ಮಗಳು ಕೃತಿಯ ವಿಚಾರಣೆಯನ್ನು ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂಬ ಕಾರಣಕ್ಕೆ ಮುಂದೂಡಲಾಗಿತ್ತು. ಹೀಗಾಗಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಿದ್ದ ಪೊಲೀಸರು, ವೈದ್ಯಕೀಯ ವರಿದಿ ಕೇಳಿದ್ದರು. ಇದೀಗ, ತನಿಖೆಗೆ ಒಳಪಡಿಸಲು ಕೃತಿ ಮಾನಸಿಕವಾಗಿ ಫಿಟ್ ಇದ್ದಾರೆ ಎಂದು ವೈದ್ಯಕೀಯ ವರದಿ ತಿಳಿಸಿದೆ. ಹೀಗಾಗಿ ಹೆಚ್ಎಸ್ಆರ್ ಲೇಔಟ್ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಎರಡು ದಿನದ ಹಿಂದೆಯೇ, ಅಂದರೆ ಕೊಲೆ ನಡದ ಮರುದಿನವೇ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು.