newsics.com
ಉತ್ತರಪ್ರದೇಶ: ಹಾವು ಕಚ್ಚಿದರೆ ಬದುಕುಳಿಯುವುದು ತುಂಬಾ ಅಪರೂಪ . ಆದರೆ ಉತ್ತರಪ್ರದೇಶದ ಫತೇಹ್ ಪುರ್ ನಿವಾಸಿವಿಕಾಸ್ ದುಬೆ ಎಂಬಾತನಿಗೆ ಕಳೆದ ಎರಡು ತಿಂಗಳಲ್ಲಿ ಐದು ಬಾರಿ ಹಾವು ಕಚ್ಚಿದ್ದರೂ ಪವಾಡ ಎಂಬಂತೆ ಬದುಕುಳಿದಿರುವ ಘಟನೆ ನಡೆದಿದೆ.
ಜೂನ್ 2ರಂದು ರಾತ್ರಿ ವಿಕಾಸ್ ದುಬೆ ಬೆಡ್ ನಿಂದ ಮೇಲೇಳಬೇಕಾದ ಸಂದರ್ಭದಲ್ಲಿ ಈ ವಿಷಕಾರಿ ಹಾವು ಮೊದಲ ಬಾರಿಗೆ ಕಚ್ಚಿತ್ತು. ಕೂಡಲೇ ಮನೆಯವರು ದುಬೆಯನ್ನು ಖಾಸಗಿ ನರ್ಸಿಂಗ್ ಹೋಮ್ ಗೆ ಕರೆದೊಯ್ದು ಎರಡು ದಿನಗಳ ಕಾಲ ಅಡ್ಮಿಟ್ ಮಾಡಿದ್ದು. ಚಿಕಿತ್ಸೆ ಪಡೆದ ನಂತರ ಮನೆಗೆ ವಾಪಸ್ ಆಗಿದ್ದ.
ಜೂನ್ 10ರ ರಾತ್ರಿ ಹಾವು ಮತ್ತೊಮ್ಮೆ ದುಬೆಗೆ ಕಚ್ಚಿತ್ತು. ಮತ್ತೆ ಮನೆಯವರು ಅದೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರ ಮನೆಗೆ ವಾಪಸ್ ಆಗಿದ್ದ. ಆದರೆ ಈ ವ್ಯಕ್ತಿಯ ಮನಸ್ಸಿನಲ್ಲಿ ಹಾವಿನ ಭಯ ತುಂಬಿ ಹೋಗಿದ್ದು, ಅದಕ್ಕಾಗಿ ಎಚ್ಚರದಿಂದ ಇರತೊಡಗಿದ್ದ. ಹಾವು ಕಡಿತದ ಭಯದಿಂದ ಮನೆಯನ್ನೇ ಬಿಟ್ಟು ತನ್ನ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ಅಲ್ಲಿಯೂ ಕೂಡಾ ಹಾವು ದಾಳಿ ನಡೆಸಿದೆ.
ಸುಮಾರು ಏಳು ದಿನ ಬಿಟ್ಟು ಜೂನ್ 17ರಂದು ಮನೆಯಲ್ಲಿ ದುಬೆಗೆ ಮತ್ತೊಮ್ಮೆ ಹಾವು ಕಚ್ಚಿದ್ದು, ಪ್ರಜ್ಞಾಹೀನನಾಗಿದ್ದ ಆತನನ್ನು ಕುಟುಂಬ ಸದಸ್ಯರು ನರ್ಸಿಂಗ್ ಹೋಮ್ ಗೆ ದಾಖಲಿಸಿ, ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ನಾಲ್ಕನೇ ಬಾರಿಯೂ ವಿಕಾಸ್ ದುಬೆಗೆ ಅದೇ ಮನೆಯಲ್ಲಿ ಹಾವು ಕಚ್ಚಿದ್ದು, ಕುಟುಂಬ ಸದಸ್ಯರು ಅದೇ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಕೊಡಿಸಿದ್ದು, ಆಗ ವೈದ್ಯರೇ ಅಚ್ಚರಿಗೊಳಗಾಗಿ, ನಾಲ್ಕು ಬಾರಿ ಹಾವು ಕಡಿದರೂ ಚಿಕಿತ್ಸೆ ಪಡೆದು ಬದುಕುಳಿದಿರುವುದು ಪವಾಡ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ