newsics.com
ಪಾಕಿಸ್ತಾನದ ಜತೆ ಯುದ್ಧ ಬೇಡ, ನಾನು ಶಾಂತಿಪ್ರಿಯ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಪಾಕಿಸ್ತಾನದ ಮಾಧ್ಯಮಗಳು ಕೊಂಡಾಡಿವೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ನಿನ್ನೆ (ಏಪ್ರಿಲ್ 26) ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ್ದ ಸಿದ್ದರಾಮಯ್ಯ, ಪಾಕ್ ಹಾಗೂ ಭಾರತದ ನಡುವೆ ಯುದ್ಧ ನಡೆಯಲಿದೆ ಎಂದು ಹರಿದಾಡುತ್ತಿರುವ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿದ್ದರು.
ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬೇಕಾದ ಅಗತ್ಯ ಇಲ್ಲ. ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಅಷ್ಟೆ. ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡುವಂತಹ ಕೆಲಸವನ್ನು ಮಾಡಬೇಕು. ಯುದ್ಧದ ಪರ ಇಲ್ಲ ನಾವು. ಶಾಂತಿ ಇರಬೇಕು, ಜನರಿಗೆ ಭದ್ರತೆ ಇರಬೇಕು, ಕೇಂದ್ರ ಸರ್ಕಾರ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಈ ಹೇಳಿಕೆ ರಾಜ್ಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿತ್ತು. ಇದೀಗ ಪಾಕಿಸ್ತಾನಕ್ಕೂ ಈ ಹೇಳಿಕೆ ತಲುಪಿದೆ. ಅಲ್ಲಿನ ಸುದ್ದಿ ವಾಹಿನಿಗಳು ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ್ದು, ಸಿದ್ದರಾಮಯ್ಯನವರ ಭಾರತದ ಯುದ್ಧ ಮಾಡುವ ಅಗತ್ಯವಿಲ್ಲ, ಬದಲಾಗಿ ಭದ್ರತಾ ಕ್ರಮ ಕೈಗೊಳ್ಳಬೇಕು ಎಂಬ ಹೇಳಿಕೆ ಸರಿ ಇದೆ ಹಾಗೂ ಇದು ಪ್ರಬುದ್ಧವಾದ ಹೇಳಿಕೆ ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿವೆ.
ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಸಿದ್ದರಾಮಯ್ಯನವರ ಸುದ್ದಿ ಪ್ರಸಾರವಾಗಿರುವ ವಿಡಿಯೊ ಹಂಚಿಕೊಳ್ಳುತ್ತಿರುವ ನೆಟ್ಟಿಗರು ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡಬಾರದಿತ್ತು. ಸಿದ್ದರಾಮಯ್ಯ ಅವರ ಪಾಕ್ ಪ್ರೀತಿ ಅತಿಯಾಯ್ತು ಎಂದು ಕಿಡಿಕಾರಿದ್ದಾರೆ.
ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯನವರೇ ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ಅವರಿಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ಅವರಿಗೆ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿದೆ. ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮೂಲಕ ಟೀಕಿಸಿದ್ದಾರೆ.
https://twitter.com/i/status/1916189551787446275
Health tips ಜಸ್ಟ್ 2 ವೀಕ್ ನಲ್ಲಿ ಬಳಕುವ ಬಳ್ಳಿಯಂತಹ ಸೊಂಟ ಬೇಕೇ?: ಹಾಗಾದ್ರೆ ದಿನಾ ಬೆಳಗ್ಗೆ ಇದನ್ನು ಕುಡಿಯಿರಿ
Viral: ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?: ವೈರಲ್ ವಿಡಿಯೋ ನೋಡಿ