newsics.com
ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಅವರು ಕೋಪಗೊಂಡ ಘಟನೆ ನಡೆದಿದೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೋನು ನಿಗಮ್ ಬಗ್ಗೆ ಈಗ ಅನೇಕರು ಅಪಸ್ವರ ತೆಗೆದಿದ್ದಾರೆ. ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಅಭಿಮಾನಿಗಳು ಗರಂ ಆಗಿದ್ದಾರೆ. ಸೋನು ನಿಗಮ್ನ ಕನ್ನಡದಿಂದ ಬ್ಯಾನ್ ಮಾಡಲು ಒತ್ತಾಯ ಕೇಳಿ ಬಂದಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದಾರೆಂದು ಆರೋಪಿಸಿ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರನ್ನು ಅವಮಾನಿಸಿರುವ ಸೋನು ನಿಗಮ್ರನ್ನು ಕನ್ನಡ ಚಿತ್ರರಂಗದಿಂದಲೇ ನಿರ್ಬಂಧಿಸಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.
ಇದೇ ವೇಳೆ ಸೋನು ನಿಗಮ್ ಹಾಡುತ್ತಿದ್ದಾಗ ಅಭಿಮಾನಿಯೊಬ್ಬರು ಕನ್ನಡದಲ್ಲಿ ಹಾಡು ಹಾಡುವಂತೆ ಮನವಿ ಮಾಡಿಕೊಂಡರು. ಆದರೆ, ಇದರಿಂದ ಕಿರಿಕಿರಿ ಉಂಟಾದವರಂತೆ ವರ್ತಿಸಿದ ಸೋನು, ಅಭಿಮಾನಿಯ ಒತ್ತಾಯದ ಧಾಟಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು