ಬುಡಕಟ್ಟು ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಹೈದರಾಬಾದ್ ಜೆಆರ್ಸಿ ಕನ್ವೆಂಷನ್ ಸೆಂಟರ್ನಲ್ಲಿ ರೆಟ್ರೋ ಚಲನಚಿತ್ರದ ಫ್ರೀ ರಿಲೀಸ್ ಕಾರ್ಯಕ್ರಮ ನಡೆದಿತ್ತು. ಈ ವೇಳೆ ವಿಜಯ್ ದೇವರಕೊಂಡ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿ ನೂರಾರು ವರ್ಷಗಳ ಹಿಂದಿನ ಬುಡಕಟ್ಟು ಸಮುದಾಯಗಳ ನಡುವಿನ ಘರ್ಷಣೆಗಳಿಗೆ ಹೋಲುತ್ತವೆ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಟ ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಬುಡಕಟ್ಟು ಸಂಘಗಳು ಒತ್ತಾಯ ಮಾಡಿದೆ.