newsics.com
ಇಸ್ಲಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇಸ್ಲಾಮಿಕ್ ಮತಾಂಧರು ನಡೆಸಿದ ಭಯೋತ್ಪಾದಕ ದಾಳಿಯ ವಿರುದ್ಧ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗ್ತಿದೆ. ಪಾಕಿಸ್ತಾನದ ವಿರುದ್ಧ ಭಾರೀ ಆಕ್ರೋಶ ಕೇಳಿ ಬರ್ತಿದೆ. ಭಾರತ ಇದಕ್ಕೆ ಪ್ರತೀಕಾರ ತೀರಿಸಲೇಬೇಕು ಎಂಬ ಕೂಗೂ ಕೇಳಿ ಬರ್ತಿದೆ. ಇದೀಗ ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸುವ ಭೀತಿ ಉಂಟಾಗಿದೆ.
ಆಹಾರ ವಸ್ತು ಸಂಗ್ರಹಿಟ್ಟುಕೊಳ್ಳುವಂತೆ ಗಡಿ ಭಾಗದ ಜನತೆಗೆ ಸೂಚನೆ ನೀಡಲಾಗಿದೆ. ನೀಲಂ ಕಣಿವೆಗೆ ತೆರಳದಂತೆ ಪ್ರವಾಸಿಗರಿಗೆ ನಿರ್ದೇಶನ ನೀಡಲಾಗಿದೆ. ಕರಾಚಿ, ಲಾಹೋರ್ ವಾಯುನೆಲೆಗಳು ದಿನದ 8 ತಾಸು ಬಂದ್ ಆಗಲಿದೆ. ಪಹಲ್ಗಾಮ್ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಆಹಾರವನ್ನು ಸಂಗ್ರಹಿಸಲು ಪಾಕ್ ನಾಗರಿಕರ ಬಳಿ ಮನವಿ ಮಾಡಿದೆ. ಪಿಒಕೆಯಲ್ಲಿರುವ ನಾಗರಿಕರಿಗೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ. .
ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಇರುವ 13 ಕ್ಷೇತ್ರಗಳಲ್ಲಿ ಎರಡು ತಿಂಗಳ ಕಾಲ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಪಿಒಕೆ ನಾಗರಿಕರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಭಾರತ ಯುದ್ಧ ಮಾಡುವ ಭೀತಿಯಲ್ಲಿರುವ ಪಾಕಿಸ್ತಾನ ಸೇನೆಯು ದೊಡ್ಡ ಪ್ರಮಾಣದ ಮಿಲಿಟರಿ ತಾಲೀಮನ್ನು ಕೈಗೊಂಡಿದೆ. ತನ್ನ ಬಳಿ ಇರೋ ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ತಂತ್ರಗಳು, ಮಿಲಿಟರಿ ಶಕ್ತಿಯನ್ನು ಪ್ರದರ್ಶನ ಮಾಡಿದೆ.