newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಹಲವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್ ಪತ್ನಿ ಎಂದು ಹೇಳಿದ್ದರು.
ಈ ಹೇಳಿಕೆ ಕುರಿತಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದು ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಹೀಗಾಗಿ ರಾಷ್ಟ್ರಮಟ್ಟದ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ದಂಪತಿ ಬಂಧನ ಎಂದು ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.
ಪವಿತ್ರಾಗೌಡ ದರ್ಶನ್ ಪತ್ನಿಯಲ್ಲ, ಆಕೆ ನನ್ನ ಗಂಡನ ಸ್ನೇಹಿತೆ ಅಷ್ಟೆ. ದರ್ಶನ್ ಅವರನ್ನು ನಾನು ಮಾತ್ರ ಕಾನೂನಾತ್ಮಕವಾಗಿ ಮದುವೆ ಆಗಿದ್ದೇನೆ. ನಮ್ಮ ಮದುವೆ 2003ರ ಮೇ 19ರಂದು ಧರ್ಮಸ್ಥಳದಲ್ಲಿ ನಡೆದಿತ್ತು ಎಂದು ವಿಜಯಲಕ್ಷ್ಮಿ ಅವರು ಈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ
ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಸಮಸ್ಯೆ!