newsics.com
ಮಂಗಳೂರು : ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿರುವ ಬೆದರಿಕೆಗಳು ಹರಿದಾಡುತ್ತಿವೆ. ಇದೀಗ ಸುಹಾಸ್ ಶೆಟ್ಟಿ ಕೊಂದವರ ಮನೆಯವರು ಅಲ್ಲಿ ಯಾರು ಸಿಗುತ್ತಾರೋ ಅವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿ ಬಿಡಲಾಗಿದೆ.
ಧನುಷ್ ಎಂಬಾತ ಫೇಸ್ಬುಕ್ ಲೈವ್ ಬಂದು ಕೊಲೆ ಬೆದರಿಕೆ ಹಾಕಿದ್ದಾನೆ. ಜಾಸ್ತಿ ದಿನ ತೆಗೆದುಕೊಳ್ಳಲ್ಲ ತಕ್ಷಣವೇ ರಿವೇಂಜ್ ಅಂತ ತೆಗೆದುಕೊಳ್ಳುತ್ತೇವೆ. ಸುಹಾಸ್ ಶೆಟ್ಟಿ ಕೊಂದವರ ಮೇಲೆ ರಿವೆಂಜ್ ತೆಗೆದುಕೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್ ಪಕ್ಕಳ ಕೊಲೆ ಬೆದರಿಕೆ ಹಾಕಿದ್ದು ಇದೀಗ ಆತನ ವಿರುದ್ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಎನ್ಎಸ್ ಆಕ್ಟ್ 196 (1) (A) 353 (1) (c) ಅಡಿ ಕೇಸ್ ದಾಖಲಾಗಿದೆ. ಇದೀಗ ಧನುಷ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.