newsics.com
ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟ, ಉಪೇಂದ್ರ ಅವರು ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಓವರ್ ಅಸಿಡಿಟಿ ಇದ್ದ ಕಾರಣಕ್ಕೆ ಮನೆಯಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೂ ಚೇತರಿಕೆ ಕಾಣದ ಕಾರಣ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.
ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲಎಂದು ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.