newsics.com
ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದರು. ಇದೀಗ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀನಗರದ ಹೊರವಲಯದ ನಿಶಾತ್ ಪ್ರದೇಶದಲ್ಲಿ ನಡೆದಿದೆ.
ಐವರು ಮಕ್ಕಳ ತಾಯಿಯಾಗಿದ್ದ ಮಹಿಳೆ ಅಲೆಮಾರಿ ಬಕರವಾಲ್ ಸಮುದಾಯಕ್ಕೆ ಸೇರಿದ್ದು, ಆಕೆ ಮತ್ತು ಸಮುದಾಯದ ಸದಸ್ಯರು ವಾರದ ಹಿಂದೆ ತಮ್ಮ ಜಾನುವಾರುಗಳೊಂದಿಗೆ ರಿಯಾಸಿ ಜಿಲ್ಲೆಯಿಂದ ವಲಸೆ ಬಂದಿದ್ದರು.
ಮಹಿಳೆ ಹತ್ತಿರದ ಪ್ರದೇಶದಲ್ಲಿ ದನಗಳನ್ನು ಮೇಯಿಸಲು ಸಂಜೆ ಐದು ಗಂಟೆಯ ಸುಮಾರಿಗೆ ತನ್ನ ಟೆಂಟ್ನಿಂದ ಹೊರಬಂದಿದ್ದರು. ರಾತ್ರಿಯಾದರೂ ಅವರು ಜಾನುವಾರುಗಳೊಂದಿಗೆ ಮರಳದಿದ್ದಾಗ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಅಸ್ವಸ್ಥಳಾಗಿ ಪತ್ತೆಯಾಗಿದ್ದಾಳೆ. ತಕ್ಷಣ ಆಸ್ಪತ್ರೆಗೆ ಸಾಗಿಸಿತ್ತಾದರು ಉಳಿಯಲಿಲ್ಲ ಎಂದು ಮಹಿಳೆಯ ಪುತ್ರ ತಿಳಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.