newsics.com
ಬೆಂಗಳೂರು: ಕಾಂತಾರ-2 ಸಿನಿಮಾ ಚಿತ್ರೀಕರಣ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವಂತ ಕಾಂತಾರ-2ಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ.
ನೀರಲ್ಲಿ ಮುಳುಗಿ ಕೇರಳದ ಜೂನಿಯರ್ ಆರ್ಟಿಸ್ ಕಪಿಲ್ ಎಂಬುವರು ಸಾವನ್ನಪ್ಪಿದ್ದಾರೆ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್ ಸಾವನ್ನಪ್ಪಿದ್ದಾನೆ.
ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಗೆ ಈಜೋದಕ್ಕೆ ತಂಡದ ಜತೆಗೆ ಕೇರಳದ ಜೂನಿಯರ್ ಆರ್ಟಿಸ್ಟ್ ಕಪಿಲ್ ತೆರಳಿದ್ದಾಗ ಈ ದುರಂತ ಸಂಭವಿಸಿದೆ.