newsics.com
ನವದೆಹಲಿ: ಪಹಲ್ಗಾಮ್ ಮೇಲೆ ಪಾಕಿಸ್ತಾನ ಉಗ್ರರು ನಡೆಸಿದ ದಾಳಿಗೆ ಭಾರತ ಈಗ ʼಆಪರೇಶನ್ ಸಿಂಧೂರʼ ಹೆಸರಿನಲ್ಲಿ ತಕ್ಕ ತಿರುಗೇಟು ಕೊಟ್ಟಿದೆ.
ಇದೀಗ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಳಿಕ ಪ್ರಧಾನಿ ಮೋದಿ ಅವರು ಕ್ರೊಯೇಷಿಯಾ, ನಾರ್ವೆ ಮತ್ತು ನೆದರ್ಲ್ಯಾಂಡ್ಸ್ ಸೇರಿ ಮೂರು ರಾಷ್ಟ್ರಗಳ ಭೇಟಿಯನ್ನು ಈ ತಿಂಗಳು ಮಾಡಬೇಕಿತ್ತು. ಆದರೆ ಭಾರತ ಪಾಕ್ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರೋದ್ರಿಂದ ಮೋದಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.ಭಾರತದ ಮಿಲಿಟರಿ ಕ್ರಮದ ನಂತರ ಪ್ರಾದೇಶಿಕ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ. ಪಾಕಿಸ್ತಾನದಲ್ಲಿ ಭಾರತದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ನಂತರ ಪ್ರಧಾನ ಮಂತ್ರಿಯವರ ಗಮನವು ದೇಶೀಯ ಮತ್ತು ತಕ್ಷಣದ ಪ್ರಾದೇಶಿಕ ವಿಷಯಗಳ ಮೇಲೆ ಉಳಿಯುವ ಸಾಧ್ಯತೆಯಿರುವುದರಿಂದ, ಭಾರತದಲ್ಲೇ ಉಳಿಯಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.