newsics.com
ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಬುಧವಾರ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಕುದ್ದು ಹೋಗಿರುವ ಪಾಕಿಸ್ತಾನ ಪ್ರತೀಕಾರಕ್ಕೆ ಮುಂದಾಗಿದೆ ನಾಗರೀಕರ ಮೇಲೆ ದಾಳಿ ಮಾಡಿ ಸಾವು ನೋವು ಹೆಚ್ಚಿಸಲು ಮುಂದಾಗಿದೆ. ಆದರೆ ಭಾರತದ ಡ್ರೋನ್ ದಾಳಿಗೆ ಪಾಕಿಸ್ತಾನದ ಲಾಹೋರ್ನಲ್ಲಿರುವ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಂಡಿದೆ. ಪಾಕಿಸ್ತಾನ ಅರ್ಧ ಮಿಲಿಟರಿ ಪಡೆಯ ಏರ್ ಡಿಫೆನ್ಸ್ ಸ್ಥಗಿತಗೊಂಡಿದೆ.
ಒಂದೆಡೆ ಯುದ್ಧ ಬೇಡ ಬೇಡ ಎನ್ನುತ್ತಾ ತನ್ನ ಸೇನಾ ಮುಖ್ಯಸ್ಥನ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಮಾಧ್ಯಮಗಳ ಮುಂದೆ ಬೊಬ್ಬೆಹೊಡೆಯುವ ಪ್ರಧಾನಿ ಶೆಹಬಾಜ್ ಷರೀಫ್, ತನ್ನ ದೇಶ ನಡೆಸಲು ಹಣಕ್ಕಾಗಿ ಅಲ್ಲಿ ಇಲ್ಲಿ ಹೋಗಿ ಅಂಗಲಾಚುತ್ತಿದ್ದಾರೆ.ಇದೀಗ ಪಾಕಿಸ್ತಾನ ಮತ್ತೆ ಹಣಕಾಸು ನಿಧಿಯಿಂದ ಹಣ ಸಾಲ ಕೇಳಿದೆ.
ಆದರೆ ಭಾರತ ಈಗಾಗಲೇ ಐಎಂಎಫ್ಗೆ ಮಹತ್ವದ ಸೂಚನೆ ನೀಡಿದೆ. ಪಾಕಿಸ್ತಾನ ಆರ್ಥಿಕತೆ, ಆಹಾರ, ಔಷಧಿಗಳಿಗೆ ಉಪಯೋಗಿಸಲು ಸಾಲ ಕೇಳಿ ಈ ಹಣವನ್ನು ಭಾರತದ ವಿರುದ್ಧ ಉಗ್ರರ ನುಸುಳಿಸಲು, ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಲು, ಮಿಲಿಟರಿ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಪಾಕಿಸ್ತಾನಕ್ಕೆ ಸಾಲ ನೀಡಬಾರದು ಎಂದು ಭಾರತ ಮನವಿ ಮಾಡಿದೆ.1.3 ಬಿಲಿಯನ್ ಅಮೆರಿಕನ್ ಡಾಲರ್ ಸಾಲವನ್ನು ಪಾಕಿಸ್ತಾನ ಕೇಳಿದೆ. ಆದರೆ ಭಾರತದ ಎಚ್ಚರಿಕೆಯಿಂದ ಇದೀಗ ಮೇ.9 ನಿರ್ಣಾಯಕವಾಗಿದೆ.
ಅಂತರರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆಯು ಮುಂದಿನ ಮೇ.9 ರಂದು ಪಾಕಿಸ್ತಾನದ ಬೂದು ಪಟ್ಟಿಯ ಸ್ಥಿತಿಗತಿ ಕುರಿತು ತನ್ನ ನಿರ್ಧಾರ ಪ್ರಕಟಿಸಲಿದೆ. ಆದರಂತೆ, ಈ ಸಭೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಹಣಕಾಸಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಾರತ ಈಗಾಗಲೇ ಸೂಚಿಸಿದೆ.. ಒಂದು ವೇಳೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಸಾಲ ಸಿಗದೇ ಹೋದಲ್ಲಿ ಪಾಕಿಸ್ತಾನ ಆರ್ಥಿಕತೆ ಹಳ್ಳ ಹಿಡಿಯಲಿದೆ. ಪಾಕಿಸ್ತಾನ ಒಳಗೇ ಸಾರ್ವಜನಿಕರು ದಂಗೆ ಏಳಲಿದ್ದಾರೆ. ಹಸಿವಿನಿಂದ ಸಾಯಲಿದ್ದಾರೆ.