newsics.com
ಬಿಗ್ ಬಾಸ್ ಕನ್ನಡ 11 ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ನಾಳೆ (ಮೇ 9) ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.
ವಂಚನೆ ವಿವಾದಕ್ಕೆ ಸಿಲುಕಿದ ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟು ಮತ್ತೆ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ರಾಜಕೀಯ, ಭಾಷಣಗಳಿಂದ ದೂರ ಉಳಿದಿರುವ ಚೈತ್ರಾ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಚೈತ್ರಾ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಚೈತ್ರಾ ಕುಂದಾಪುರ ತನ್ನ ಬಹುದಿನಗಳ ಗೆಳೆಯನನ್ನು ವಿವಾಹವಾಗುತ್ತಿದ್ದಾರೆಂದು ಹೇಳಲಾಗುತ್ತಿದೆ.
ಕೆಲವು ದಿನಗಳ ಹಿಂದಷ್ಟೇ ಚೈತ್ರಾ ತನ್ನ ಆಪ್ತರಿಗೆ, ಸ್ನೇಹಿತರಿಗೆ, ಕಿರುತೆರೆಯ ತಾರೆಯರಿಗೆ ಆಮಂತ್ರಣ ನೀಡಿದ್ದು ಸುದ್ದಿಯಾಗಿತ್ತು.
ಸೈಲೆಂಟ್ ಆಗಿಯೇ ಮದುವೆಗೆ ತಯಾರಾಗಿರುವ ಚೈತ್ರಾ ಕುಂದಾಪುರ ಇದುವರೆಗೂ ತಾನು ಮದುವೆ ಆಗುತ್ತಿರುವ ಹುಡುಗನ ಬಗ್ಗೆ ಮಾಹಿತಿ ಕೊಟ್ಟಿಲ್ಲ.
ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮೆಹಂದಿ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅವರ ಅಭಿಮಾನಿಗಳು, ನೆಟ್ಟಿಗರು ಶುಭಾಶಯಗಳನ್ನು ತಿಳಿಸುವುದಕ್ಕೆ ಆರಂಭಿಸಿದ್ದಾರೆ.
ಮೆಹಂದಿ ಸಂಭ್ರಮದ ವಿಡಿಯೋದಲ್ಲಿ ಚೈತ್ರಾ ಕೈ ಹಾಗೂ ಕಾಲುಗಳಲ್ಲಿ ಮೆಹಂದಿ ಚಿತ್ತಾರ ಕಾಣಬಹುದು. ಮದುವೆಯಾಗುತ್ತಿರುವ ಚೈತ್ರಾ ಮುಖದಲ್ಲಿ ಮದುಮಗಳ ಕಳೆ ಎದ್ದು ಕಾಣುತ್ತಿದೆ.
ವಿಡಿಯೋ ಪೋಸ್ಟ್ಗೆ ‘ಮದುವೆಯ ಮೆಹೆಂದಿ’ ಟೈಟಲ್ ಕೊಟ್ಟು, ಮೆಹಂದಿಯ ಸಂಪ್ರದಾಯದ ಪ್ರಾಮುಖ್ಯತೆ ವಿವರಿಸಿದ್ದಾರೆ.
‘ತ್ರೇತಾಯುಗದಲ್ಲಿ ಶ್ರೀರಾಮ, ಲಕ್ಷ ಣ, ಭರತ ಮತ್ತು ಶತ್ರುಘ್ನರ ವಿವಾಹದ ಸಮಯದಲ್ಲಿ ಅವರನ್ನು ಸಿಂಗರಿಸಲು ಅವರ ಕೈ, ಕಾಲು, ಹಾಗೆಯೇ ಮುಖದ ಮೇಲೆ ಪಾಷಾಣಬಣ್ಣ (ವಿವಿಧ ಬಣ್ಣದ ಕಲ್ಲುಗಳಿಂದ ತಯಾರಿಸಿದ ಬಣ್ಣ) ಮತ್ತು ಪುಷ್ಪಬಣ್ಣ (ವಿವಿಧ ಬಣ್ಣದ ಹೂವುಗಳಿಂದ ತಯಾರಿಸಿದ ಬಣ್ಣ) ಗಳ ಸಹಾಯದಿಂದ ಎಲೆ-ಹೂವು ಮುಂತಾದ ಆಕಾರಗಳನ್ನು ಬಿಡಿಸಲಾಗಿತ್ತು. ಈ ಬಣ್ಣಗಳಲ್ಲಿ ವಿವಿಧ ಔಷಧೀಯ ವನಸ್ಪತಿಗಳ ರಸಗಳನ್ನು ಬೆರೆಸಲಾಗಿತ್ತು. ಈ ಸುಗಂಧಿ ಮಿಶ್ರಣಕ್ಕೆ ‘ಪತ್ರಾವಲೀ’ ಎಂದು ಹೇಳುತ್ತಿದ್ದರು. (‘ಭುಶುಂಡೀ ರಾಮಾಯಣ’ ಮತ್ತು ‘ಶ್ರೀನಾಥಮುನಿ ರಾಮಾಯಣ’) ದ್ವಾಪರಯುಗದಲ್ಲಿಯೂ ಸಿಂಗಾರಕ್ಕಾಗಿ ‘ಪತ್ರಾವಲೀ’ಯನ್ನು ಉಪಯೋಗಿಸಲಾಗುತ್ತಿತ್ತು. ‘ತೋಕ’ ಎಂಬ ಹೆಸರಿನ ಶ್ರೀಕೃಷ್ಣನ ಮಿತ್ರನು ‘ಪತ್ರಾವಲೀ’ಯಿಂದ ಶ್ರೀಕೃಷ್ಣನನ್ನು ಸಿಂಗರಿಸುತ್ತಿದ್ದನು’ ಎಂದು ‘ಗರ್ಗಸಂಹಿತೆ’, ‘ಶ್ರೀಮದ್ಭಾಗವತ’, ‘ಶ್ರೀಕೃಷ್ಣಕರ್ಣಾಮೃತ’ ಮುಂತಾದ ಶ್ರೀಕೃಷ್ಣನ ಬಗೆಗಿನ ಪ್ರಮುಖ ಗ್ರಂಥಗಳಲ್ಲಿ ಉಲ್ಲೇಖಿಸಿರುವುದು ಕಂಡುಬರುತ್ತದೆ. ಆ ಸಮಯದಲ್ಲಿ ಶ್ರೀಕೃಷ್ಣನ ಗೋವುಗಳನ್ನೂ ‘ಪತ್ರಾವಲಿ’ಯಿಂದ ಸಿಂಗರಿಸಲಾಗುತ್ತಿತ್ತು.
ಮದರಂಗಿ ಕೇವಲ ಬಣ್ಣವಲ್ಲ ಅದು ಸಂಸ್ಕೃತಿಯ ಕೈಗನ್ನಡಿ ಎಂದು ವಿಡಿಯೋ ಶೇರ್ ಮಾಡುವುದರ ಜತೆಗೆ ಮಾಹಿತಿಯನ್ನೂ ನೀಡಿದ್ದಾರೆ.
ಚೈತ್ರಾ ಕುಂದಾಪುರ ಸುಮಾರು 12 ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗನೊಂದಿಗೆ ಸಪ್ತಪದಿ ತುಳಿಯುತ್ತಿದ್ದಾರೆಂದು ಹೇಳಲಾಗಿದೆ.
ಚೈತ್ರಾ ತಮ್ಮ ಮದುವೆಗೆ ಕೇವಲ ತಮ್ಮ ಕುಟುಂಬಸ್ಥರಿಗೆ, ಆಪ್ತರಿಗೆ ಹಾಗೂ ಬಿಗ್ ಬಾಸ್ ಕನ್ನಡ 11ರ ಸ್ಪರ್ಧಿಗಳು ಹಾಗೂ ಬಾಯ್ಸ್ Vs ಗರ್ಲ್ಸ್ ಶೋನ ಸ್ನೇಹಿತರಿಗಷ್ಟೇ ಆಹ್ವಾನ ನೀಡಿದ್ದಾರೆಂದು ಹೇಳಲಾಗುತ್ತಿದೆ.
https://www.instagram.com/reel/DJYQB_gICb9/?igsh=ejMxaTlhMWljZTVj
Ramya Pashupileti ಹಾಟ್ ಅವತಾರದಲ್ಲಿ ಪಡ್ಡೆಗಳ ಮನಗೆದ್ದ ನಟಿ ರಮ್ಯಾ ಪಶುಪಿಲೇತಿ