newsics.com
ಪಾಕಿಸ್ತಾನಕ್ಕೆ ಭಾರತ ಇದೀಗ ಸಲಾಲ್ ಹಾಗೂ ಬಾಗ್ಲಿಹಾರ್ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣವಿದೆ. ಪಾಕಿಸ್ತಾನಕ್ಕೆ ಏರ್ ಸ್ಟ್ರೈಕ್ ನಂತರ ವಾಟರ್ ಸ್ಟ್ರೈಕ್ ಮೂಲಕ ಶಾಕ್ ನೀಡಲಾಗಿದೆ. ರಿಯಾಸಿಯಲ್ಲಿ ಚೈನಾಬ್ ನದಿಗೆ ನಿರ್ಮಿಸಿರುವ ಸಲಾಲ್ ಜಲಾಶಯದಿಂದ ಹಲವಾರು ಗೇಟ್ ಗಳನ್ನು ತೆರೆದು ನೀರು ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಭಾರತ ಸಿಂಧೂ ನದಿ ನೀರನ್ನು ಏಕಾಏಕಿ ಹರಿಸಿದ್ದರಿಂದ ಪಾಕ್ ನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು.
ಈ ಪ್ರದೇಶದಲ್ಲಿ ಭಾರೀ ಮಳೆಯಾದ ನಂತರ ಗೇಟ್ಗಳನ್ನು ತೆರೆಯಲಾಯಿತು. ಭಾರೀ ಮಳೆಯಿಂದಾಗಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ, ನೀರನ್ನು ಬಿಡುಗಡೆ ಮಾಡಬೇಕಾಯಿತು. ಗುರುವಾರ ಸಲಾಲ್ ವಿದ್ಯುತ್ ಯೋಜನೆಯ ಮೂರು ಗೇಟ್ಗಳು ಮತ್ತು ಬಾಗ್ಲಿಹಾರ್ ಯೋಜನೆಯ ಎರಡು ಗೇಟ್ಗಳನ್ನು ತೆರೆಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.