newsics.com
ಕಾರವಾರ(ಉತ್ತರ ಕನ್ನಡ): ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗುರುವಾರ ನಡೆದಿದೆ
ಅಂಕೋಲಾ ತಾಲೂಕಿನ ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಮೃತಪಟ್ಟವರು. ಹರೇರಾಮ್ ಗೋಪಾಲ್ ಭಟ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಗುರುವಾರ ಮೃತಪಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂವಿಗೆ ಈ ಬಾರಿ ಇದು ಮೊದಲ ಬಲಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 119 ಜನರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ 6,676 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಗುರುವಾರ 286 ಮಂದಿಗೆ ಡೆಂಗ್ಯೂ ಇರುವುದು ವರದಿಯಾಗಿದೆ.
ಇದನ್ನೂ ಓದಿ:
ಸ್ವೀಟ್ ಅಂಗಡಿಗಳ ಮೇಲೆ ದಾಳಿ: ಕ್ಯಾನ್ಸರ್ಕಾರಕ ಬಣ್ಣಗಳ ಸ್ವೀಟ್ಸ್ ವಶ
ದರ್ಶನ್, ಪವಿತ್ರಾ ಗೌಡ ಟೀಮ್ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ
ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ
ಫಸ್ಟ್ ನೈಟ್ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್ರೂಮ್ಗೆ ಹೋದ ಪತ್ನಿಗೆ ಶಾಕ್