newsics.com
ಪಾಪಿ ಪಾಕಿಸ್ತಾನ, ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಡ್ರೋನ್ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿದೆ. ತಮ್ಮ ನೀಚ ಬುದ್ದಿ ಪ್ರದರ್ಶಿಸಿದ ಪಾಪಿಸ್ತಾನ, ಗಡಿರಾಜ್ಯಗಳ ಹಲವು ಭಾಗಗಳಲ್ಲಿ ದಾಳಿ ನಡೆಸಿದೆ. ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಈ ನಡುವೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸುದ್ದಿಗೋಷ್ಠಿ ನಡೆಸಿ, “ನಮ್ಮ ದಾಳಿಯು ಶತ್ರುಗಳ (ಭಾರತ) ವಾಯುನೆಲೆ ಮತ್ತು ಮದ್ದುಗುಂಡುಗಳನ್ನು ನಾಶಪಡಿಸಿತು. ಅವರ ರಫೇಲ್ ಅನ್ನು ನಾವು ಹೊಡೆದುರುಳಿಸಿದ್ದೇವೆ. ನಾವು ಭಾರತದ ವಿರುದ್ಧ ಗೆದ್ದಿದ್ದೇವೆ ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ, ಕದನ ವಿರಾಮ ಉಲ್ಲಂಘನೆ ಬಗ್ಗೆ ಮಾತನಾಡದೆ, ತಮ್ಮ ಉದ್ದಟತನವನ್ನು ಮುಂದುವರೆಸಿದ್ದಾರೆ.
ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಶೆಹಬಾಜ್ ಶರೀಫ್, “ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ಚೀನಾ ಅಧ್ಯಕ್ಷ, ಚೀನಾದ ಜನರಿಗೆ ಧನ್ಯವಾದ ಹೇಳುತ್ತೇನೆ. ಸೌದಿ ಅರೇಬಿಯಾ, ಯುಎಇ, ಟರ್ಕಿ, ಕತಾರ್ ಮತ್ತು ಬ್ರಿಟನ್ ನಾಯಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದಿದ್ದಾರೆ.
l