newsics.com
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಡುವೆ ಕದನ ವಿರಾಮದ ಒಪ್ಪಂದವಾಗಿತ್ತು. ಇಂದು ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಕದನವಿರಾಮ ಘೋಷಿಸಲಾಗಿತ್ತು. ಆದರೆ, ಅದಾದ ಕೆಲವೇ ಗಂಟೆಗಳಲ್ಲಿ ಕದನವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಭಾರತದ ಜಮ್ಮು, ರಾಜಸ್ಥಾನದ ಗಡಿ, ಗುಜರಾತ್ ಗಡಿ ಭಾಗದಲ್ಲಿ ಡ್ರೋನ್ ಮತ್ತು ಶೆಲ್ ದಾಳಿ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ವೀರೇಂದರ್ ಸೆಹ್ವಾಗ್ ಪಾಕಿಸ್ತಾನದ ವಿರುದ್ಧ ಕೆಂಡಾಮಂಡಲಾರಾಗಿದ್ದಾರೆ.
ವೀರೇಂದ್ರ ಸೆಹ್ವಾಗ್ ಎಕ್ಸ್ ಮೂಲಕ ಪೋಸ್ಟ್ ಒಂದನ್ನು ಮಾಡಿದ್ದು, ಅದರಲ್ಲಿ, ನಾಯಿಯ ಬಾಲ ಎಂದಿಗೂ ನೇರವಾಗಿರುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಒಂದು ಮಾತಿನ ಮೂಲಕ ಅವರು ಪಾಕಿಸ್ತಾನವನ್ನು ನಾಯಿ ಎಂದು ಕರೆದಿದ್ದಾರೆ. ಇದಕ್ಕೂ ಮೊದಲು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಅಮೆರಿಕ ಮಧ್ಯಸ್ಥಿಕೆಯ ಮಾತುಕತೆಗಳ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಮತ್ತು ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಇದು ಅಮೆರಿಕ ಮಧ್ಯಸ್ಥಿಕೆಯ ಮಾತುಕತೆಗಳಿಂದಾಗಿ ಸಾಧ್ಯವಾಯಿತು ಎಂದು ಹೇಳಿಕೊಂಡಿತ್ತು.