newsics.com
ನವದೆಹಲಿ: ಭಾರತ ಮತ್ತು ನಡುವೆ ಹಲವು ದಿನಗಳ ಗುಂಡಿನ ದಾಳಿ, ಕ್ಷಿಪಣಿ ಮತ್ತು ಡ್ರೋನ್ ದಾಳಿಯ ನಂತರ, ಈಗ ಕದನ ವಿರಾಮ ಒಪ್ಪಂದಕ್ಕೆ ಬರಲಾಗಿದೆ. ಆದ್ರೆ ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ನಡೆಸಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಹೀಗಾಗಿ ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ನಡುವೆ ಭಾರತದ ನಿರ್ಧಾರ ಏನು ಎಂಬ ಪ್ರಶ್ನೆ ಎದ್ದಿತ್ತು.
ಇದೀಗ ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ ಮುಂದುವರಿಯುತ್ತದೆ ಎಂದು ಭಾರತೀಯ ತಿಳಿಸಿದೆ.
ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವುದರಿಂದ ಸರಿಯಾದ ಸಮಯದಲ್ಲಿ ವಿವರವಾದ ಮಾಹಿತಿ ನಡೆಸಲಾಗುವುದು. ಪರಿಶೀಲಿಸದ ಮಾಹಿತಿ, ವದಂತಿ ಸುದ್ದಿಗಳಿಗೆ ಯಾರು ಕಿವಿಗೊಡಬಾರದು ಎಂದು ವಾಯುಸೇನೆ ಮನವಿ ಮಾಡಿದೆ.