newsics.com
ವೃಂದಾವನ: ನಿನ್ನೆಯಷ್ಟೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ ಇಂದು ತಮ್ಮ ಪತ್ನಿ ಅನುಷ್ಕಾ ಶರ್ಮಾ ಜತೆ ಉತ್ತರ ಪ್ರದೇಶದ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ದಂಪತಿಗಳು ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದಿದ್ದಾರೆ.
ವೃಂದಾವನದಲ್ಲಿ, ಕೊಹ್ಲಿ ಮತ್ತು ಅನುಷ್ಕಾ ಅವರು ಪ್ರೇಮಾನಂದ್ ಜಿ ಮಹಾರಾಜ್ ಅವರ ಮುಂದೆ ಗೌರವದಿಂದ ಕುಳಿತು ಆಶೀರ್ವಾದ ಪಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ದಂಪತಿಗಳು ಇತ್ತೀಚಿನ ವರ್ಷಗಳಲ್ಲಿ ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರಿದ್ದಾರೆ. 2023ರಲ್ಲಿ ಅವರು ಕೈಂಚಿ ಧಾಮದ ನೀಮ್ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡಿದ್ದರು.
ಕೊಹ್ಲಿ ಅವರ ನಿವೃತ್ತಿಯು ಭಾರತೀಯ ಕ್ರಿಕೆಟ್ಗೆ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ. ಜೂನ್ 20 ರಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಅವರ ಅನುಪಸ್ಥಿತಿಯು ತಂಡಕ್ಕೆ ಸವಾಲಾಗಲಿದೆ.
ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 123 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 210 ಇನ್ನಿಂಗ್ಸ್ ಆಡಿ 9230 ರನ್ ಬಾರಿಸಿದ್ದಾರೆ. ಟೆಸ್ಟ್ನಲ್ಲಿ ಅಜೇಯ 254 ರನ್ ಗರಿಷ್ಟ ರನ್ ಬಾರಿಸಿರುವ ಕೊಹ್ಲಿ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.