newsics.com
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತ ಆರೋಪಿಗಳು.
ಮೇ 1ರಂದು ಬಜಪೆಯ ಕಿನ್ನಿಪದವು ಬಳಿ ರಾತ್ರಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.