newsics.com
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏ. 22ರಂದು ಉಗ್ರವಾದಿಗಳ ದಾಳಿ ನಡೆದ ನಂತರ, ಪಾಕಿಸ್ತಾನದ ಮೇಲೆ ಮುನಿದಿದ್ದ ಭಾರತ, ಸಿಂಧೂ ನದಿ ನೀರು ಒಪ್ಪಂದ ಅಮಾನತುಗೊಳಿಸಿತ್ತು. ಅದರಿಂದ ಪಾಕಿಸ್ತಾನದ ಸಿಂಧೂ ನದಿ ಬಯಲಿನಲ್ಲಿ ಜಲಕ್ಷಾಮ ಉಂಟಾಗಿದೆ. ನೀರು ನಿಂತಿರುವುದು ಅಲ್ಲಿನ ನದಿಪಾತ್ರದಲ್ಲಿ ಜಲಕ್ಷಾಮ ಉಂಟಾಗಿ, ಹನಿಹನಿ ನೀರಿಗೂ ಒದ್ದಾಡುವಂತಾಗಿದೆ. ಹಾಗಾಗಿ, ಅಲ್ಲಿನ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಸಯ್ಯದ್ ಅವರು ಭಾರತಕ್ಕೆ ಪತ್ರ ಬರೆದು ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಭಾರತವು ಔಪಚಾರಿಕವಾಗಿ ತಿಳಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಸರ್ಕಾರದ ಪರವಾಗಿ ಭಾರತ ಆಕ್ಷೇಪಿಸುವ ನಿರ್ದಿಷ್ಟ ಷರತ್ತುಗಳನ್ನು ಚರ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.
ಸಿಂಧೂ ನದಿ ನೀರನ್ನು ತಡೆ ಹಿಡಿಯುವ ಮೂಲಕ ಪಾಕಿಸ್ತಾನಕ್ಕೆ ಒಂದು ಹನಿ ನೀರನ್ನೂ ಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ. ಅಷ್ಟೇ ಅಲ್ಲದೆ, ಸಿಂಧೂ ನದಿ ಕಣಿವೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಥಾನಗೊಳಿಸಲು ಭಾರತ ನಿರ್ಧರಿಸಿದೆ. ಕಣಿವೆ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಭಾರತಕ್ಕೆ ಮುಕ್ತ ಅವಕಾಶವಿದೆ.