newsics.com
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಜಮಖಂಡಿ ಪಟ್ಟಣದಲ್ಲಿರುವ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರ್ನೆ ಎಂಬ ವರ ವಧುವಿಗೆ ತಾಳಿ ಕಟ್ಟಿದ್ದರು. ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಪ್ರವೀಣ್ ಕುರ್ನೆಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆ.
ಇಂದು ಪೂಜಾ ಎಂಬ ವಧುವಿನ ಜೊತೆ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ನಿವಾಸಿ ಪ್ರವೀಣ್ ಕುರ್ನೆ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಂಡನ ಜೊತೆ ಹಾಗೆ ಇರಬೇಕು, ಹೀಗೆ ಸಂಸಾರ ಮಾಡಬೇಕು ಎಂದು ನೂರಾರು ಕನಸುಗಳನ್ನು ಕಟ್ಟಿಕೊಂಡು ಬಂದ ವಧುವಿಗೆ ಬರ ಸಿಡಿಲು ಬಡಿದಂತಾಗಿದೆ. ಮದುವೆಗೆ ಬಂದ ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.
Shivarajkumar ಶಿವಣ್ಣನ ಮನೆಯಲ್ಲಿ ಮಹತ್ವದ ಸಭೆ: ಹಲವು ನಟರು ಭಾಗಿ.!