newsics.com
ಗದಗ: ಜಿಲ್ಲೆಯ ಖಾನತೋಟ ಓಣಿಯಲ್ಲಿ
ಸತತ ಮಳೆಯಿಂದ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದೆ.
ಮಂಗಳವಾರ ಬೀಸಿದ ಬಿರುಗಾಳಿಯಿಂದ ಬೇರುಗಳು ಸಡಿಲಗೊಂಡು ರಸ್ತೆಗೆ ಉರುಳಿದೆ.
ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬವು ನೆಲಕ್ಕಪಳಿಸಿದೆ. ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಮರ ಹಾಗೂ ವಿದ್ಯುತ್ ಕಂಬ ಬಿದ್ದಾಗ ರಸ್ತೆಯಲ್ಲಿ ಜನ ಸಂಚಾರ ಇಲ್ಲದಿದ್ದುದರಿಂದ ಭಾರೀ ಅನಾಹುತ ತಪ್ಪಿದೆ.
ಬಿರುಗಾಳಿ ಮಳೆಗೆ ಖಾನತೋಟ ಬಡಾವಣೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ನಂತರ ನಗರಸಭೆ ಹಾಗೂ ಅರಣ್ಯ ಇಲಾಖೆಯವರು ಮರ ತೆರವುಗೊಳಿಸಿದರು. ಇನ್ನು ಹೆಸ್ಕಾಂ ಸಿಬ್ಬಂದಿ ಸಹ ವಿದ್ಯುತ್ ಕಂಬ ತೆರವುಗೊಳಿಸಿದರು.