newsics.com
ಲಕ್ನೋ(ಉತ್ತರ ಪ್ರದೇಶ): ಬಡವರಿಗೆ ಸೂರು ನೀಡಬೇಕು ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಇದರಿಂದ ಅವರು ವಾಸಿಸಲು ಸ್ವಂತ ಮನೆಗಳನ್ನು ನಿರ್ಮಿಸಿಕೊಳ್ಳಬಹುದು.
ಆದರೆ ಉತ್ತರ ಪ್ರದೇಶದಲ್ಲಿ ಆಗಿದ್ದೇ ಬೇರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೊದಲ ಕಂತಿನ ಹಣ ಪಡೆದ ಮಹಿಳೆಯರು, ತಮ್ಮ ಗಂಡಂದಿರನ್ನು ಬಿಟ್ಟು, ತಮ್ಮ ತಮ್ಮ ಪ್ರೇಮಿಗಳ ಜತೆ ಊರಿನಿಂದ ಪರಾರಿಯಾಗಿದ್ದಾರಂತೆ.
ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಗ್ರಾಮವೊಂದರಲ್ಲಿ ಇಂಥದ್ದೊಂದು ವಿಲಕ್ಷಣ ಘಟನೆ ನಡೆದಿವೆ.
ಅದೂ ಒಬ್ಬರಲ್ಲ, ಬರೋಬ್ಬರಿ 11 ಮಹಿಳೆಯರು ತಮ್ಮ ಗಂಡನನ್ನು ಬಿಟ್ಟು, ಪ್ರೇಮಿಗಳ ಜತೆ ಊರು ಬಿಟ್ಟು ಓಡಿ ಹೋಗಿದ್ದಾರಂತೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ ತಕ್ಷಣ 11 ಮಹಿಳೆಯರು ತಮ್ಮ ಪತಿಯನ್ನು ತೊರೆದು ಪ್ರೇಮಿಗಳೊಂದಿಗೆ ಓಡಿಹೋಗಿದ್ದಾರಂತೆ.
ಮಹಾರಾಜ್ಗಂಜ್ನ ನಿಚ್ಲಾಲ್ ಬ್ಲಾಕ್ ಪ್ರದೇಶದ ಒಟ್ಟು 108 ಗ್ರಾಮಗಳಲ್ಲಿ 2023-24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 2350 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಎರಡು ಸಾವಿರಕ್ಕೂ ಹೆಚ್ಚು ಫಲಾನುಭವಿಗಳ ಮನೆಗಳೂ ಪೂರ್ಣಗೊಂಡಿವೆ. ಇದರ ಅಡಿಯಲ್ಲಿ 11 ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಮೊದಲ ಕಂತಿನ ಹಣವಾಗಿ 40 ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿತ್ತಂತೆ.
ಅತ್ತ ಮೊದಲ ಕಂತಿನ ಹಣದೊಂದಿಗೆ ಹೆಂಡತಿಯರು ಪರಾರಿಯಾಗಿದ್ದರೆ, ಇತ್ತ ಪತಿ, ಮಕ್ಕಳು ಹಾಗೂ ಕುಟುಂಬಸ್ಥರು ಮನೆಯೂ ಇಲ್ಲ, ಹೆಂಡತಿಯೂ ಇಲ್ಲ ಎಂದು ಪರದಾಡುತ್ತಿದ್ದಾರೆ.
ಓಡಿ ಹೋದ ಮಹಿಳೆಯರ ಗಂಡಂದಿರು ಎರಡನೇ ಕಂತಿನ ಹಣವನ್ನು ಪತ್ನಿಯ ಖಾತೆಗೆ ಕಳುಹಿಸದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ
ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು