newsics.com
ಬೆಂಗಳೂರು: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು.
ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.