Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H.S. Venkatesh Murthy passes away ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶ ಮೂರ್ತಿ ವಿಧಿವಶ
ಕರ್ನಾಟಕ

H.S. Venkatesh Murthy passes away ಖ್ಯಾತ ಸಾಹಿತಿ ಎಚ್ ಎಸ್ ವೆಂಕಟೇಶ ಮೂರ್ತಿ ವಿಧಿವಶ

Share
1 Min Read
SHARE

newsics.com

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿಯಾಗಿರುವ ಎಚ್‌.ಎಸ್.ವೆಂಕಟೇಶ್ ‌ಮೂರ್ತಿ ಕೆಂಗೇರಿಯ‌ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್ಎಸ್‌ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್‌ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.

ಅವರು ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇನ್ನು ಎಚ್‌ಎಸ್‌ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ನಿವೃತ್ತಿಯ ನಂತರ ಎಚ್‌ಎಸ್‌ವಿ ಬೆಂಗಳೂರಿನಲ್ಲಿ ವಾಸವಾಗಿದ್ದರು.

ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು. ‘ಈ ಮುಖೇನ‘ ಇವರ ವೈಚಾರಿಕ ಪ್ರಬಂಧಗಳ ಸಂಪುಟ. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಎಚ್‌ಎಸ್‌ವಿ ಅವರು ಪಡೆದ ಕೆಲವು ಮುಖ್ಯ ಗೌರವ ಪುರಸ್ಕಾರಗಳು.

ಎಚ್. ಎಸ್. ವೆಂಕಟೇಶ ಮೂರ್ತಿ ಮುಖ್ಯ ಕೃತಿಗಳು
ಕವನ ಸಂಕಲನಗಳು
ಸಿಂದಬಾದನ ಆತ್ಮಕಥೆ
ಕ್ರಿಯಾಪರ್ವ
ಒಣಮರದ ಗಿಳಿಗಳು
ಎಷ್ಟೊಂದು ಮುಗಿಲು
ನದೀತೀರದಲ್ಲಿ
ಉತ್ತರಾಯಣ ಮತ್ತು…

ನಾಟಕಗಳು
ಅಗ್ನಿವರ್ಣ
ಚಿತ್ರಪಟ
ಉರಿಯ ಉಯ್ಯಾಲೆ
ಮಂಥರೆ
ಕಂಸಾಯಣ

ಮಕ್ಕಳ ಕೃತಿಗಳು
ಹಕ್ಕಿಸಾಲು
ಅಳಿಲು ರಾಮಾಯಣ
ಅಜ್ಜೀ ಕಥೆ ಹೇಳು
ಚಿನ್ನಾರಿ ಮುತ್ತ

TAGGED:#Famous #Kannadapoet #writer#HSKrishnamurthy #passesaway
Share This Article
Facebook Twitter Copy Link Print
Previous Article ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ
Next Article Reminiscence of HSV ಪ್ರೀತಿಯ ಕವಿ HSVಗೆ ಭಾವಪೂರ್ಣ ವಿದಾಯ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?